ರಾಜ್ಯ

ಕರ್ನಾಟಕವನ್ನು ಬರ್ಬಾದ್‌ ಮಾಡುವುದೇ ಕಾಂಗ್ರೆಸ್‌ ಸರ್ಕಾರದ ಅಸಲಿ ಮಾಡೆಲ್: ರಾಜ್ಯ ಬಿಜೆಪಿ ಕಿಡಿ

ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್‌, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್‌ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.

ಜೊತೆಗೆ ದೈನಂದಿನ ಖರ್ಚಿಗೂ ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದನ್ನು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಂಜನಗೂಡು: ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ: ಪಟ್ಟಣದಲ್ಲಿ ಆತಂಕ

ನಂಜನಗೂಡು: ಪಟ್ಟಣದಲ್ಲಿ ಸರಣಿ ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಆರ್.ಪಿ. ರಸ್ತೆಯಲ್ಲಿರುವ ಸುಮಾರು 14…

4 mins ago

ಚಾಮರಾಜನಗರದಲ್ಲಿ ಮತ್ತೊಂದು ಹುಲಿ ಸೆರೆ

ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…

46 mins ago

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

3 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

3 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

3 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

3 hours ago