ಬೆಂಗಳೂರು: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ರಾಜ್ಯ ಬಿಜೆಪಿ ಘಟಕ ತನ್ನ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.
ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್ ಮಾಡುವುದೇ ಕಾಂಗ್ರೆಸ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.
ಜೊತೆಗೆ ದೈನಂದಿನ ಖರ್ಚಿಗೂ ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಕರ್ನಾಟಕ ಬರ್ಬಾದ್ ಆಗಿದೆ ಎಂಬುದನ್ನು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…