ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ 2026 -27 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6 ರಿಂದ 14 ದಿನಗಳ ಕಾಲ ಅಂದರೆ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಈ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನು ಹೊಂದಿರುವುದರಿಂದ ಮೊದಲ ದಿನ 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರ 17ನೇ ಬಜೆಟ್ ಕೂಡ ಇದಾಗಲಿದೆ. ಬಜೆಟ್ ಮಂಡನೆ ದಿನ ಬಜೆಟ್ ಹೊರತುಪಡಿಸಿ ಬೇರೆ ವಿಚಾರಗಳ ಕಾರ್ಯಕಲಾಪಗಳು ಇರುವುದಿಲ್ಲ. ಮಾ.9 ರಿಂದ ಸರ್ಕಾರದ ಕಾರ್ಯಕಲಾಪಗಳು ಬಜೆಟ್ ಮೇಲಿನ ಚರ್ಚೆ ಮುಂದುವರೆಯಲಿದೆ. ಮಾ.31 ರ ವೇಳೆಗೆ 2026-27ನೇ ಸಾಲಿನ ಆಯವ್ಯಯಕ್ಕೆ ಉಭಯಸದನಗಳು ಅನುಮೋದನೆ ನೀಡಬೇಕಿದೆ. ಜಂಟಿ ಅಧಿವೇಶನ ಮುಕ್ತಾಯಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕತ್ವದ ಗೊಂದಲಕ್ಕೆ ತೆರೆ ಎಳೆದಿಲ್ಲ. ಆದರೂ ವಾಡಿಕೆಯಂತೆ ರಾಜ್ಯದಲ್ಲಿ ಬಜೆಟ್ ಸಿದ್ಧತೆ, ಅಧಿವೇಶನ ನಡೆಸಲು ಸಂಪುಟದ ಅನುಮೋದನೆ ಪಡೆಯುವ ಪ್ರಯತ್ನಗಳು ಜರುಗುತ್ತಿವೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…