ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ 2026 -27 ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾರ್ಚ್ 6 ರಿಂದ 14 ದಿನಗಳ ಕಾಲ ಅಂದರೆ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಯಿತು.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಈ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಕಾಸು ಖಾತೆಯನ್ನು ಹೊಂದಿರುವುದರಿಂದ ಮೊದಲ ದಿನ 2026-27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ ಅವರ 17ನೇ ಬಜೆಟ್ ಕೂಡ ಇದಾಗಲಿದೆ. ಬಜೆಟ್ ಮಂಡನೆ ದಿನ ಬಜೆಟ್ ಹೊರತುಪಡಿಸಿ ಬೇರೆ ವಿಚಾರಗಳ ಕಾರ್ಯಕಲಾಪಗಳು ಇರುವುದಿಲ್ಲ. ಮಾ.9 ರಿಂದ ಸರ್ಕಾರದ ಕಾರ್ಯಕಲಾಪಗಳು ಬಜೆಟ್ ಮೇಲಿನ ಚರ್ಚೆ ಮುಂದುವರೆಯಲಿದೆ. ಮಾ.31 ರ ವೇಳೆಗೆ 2026-27ನೇ ಸಾಲಿನ ಆಯವ್ಯಯಕ್ಕೆ ಉಭಯಸದನಗಳು ಅನುಮೋದನೆ ನೀಡಬೇಕಿದೆ. ಜಂಟಿ ಅಧಿವೇಶನ ಮುಕ್ತಾಯಗೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ವಿವಿಧ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಬಜೆಟ್ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕತ್ವದ ಗೊಂದಲಕ್ಕೆ ತೆರೆ ಎಳೆದಿಲ್ಲ. ಆದರೂ ವಾಡಿಕೆಯಂತೆ ರಾಜ್ಯದಲ್ಲಿ ಬಜೆಟ್ ಸಿದ್ಧತೆ, ಅಧಿವೇಶನ ನಡೆಸಲು ಸಂಪುಟದ ಅನುಮೋದನೆ ಪಡೆಯುವ ಪ್ರಯತ್ನಗಳು ಜರುಗುತ್ತಿವೆ.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…