ರಾಜ್ಯ

ಮಾರ್ಚ್.‌6ರಂದು ರಾಜ್ಯ ಬಜೆಟ್‌ ಮಂಡನೆಗೆ ಚಿಂತನೆ

ಬೆಂಗಳೂರು: ಮುಂಬರುವ ಮಾರ್ಚ್‌ ತಿಂಗಳಲ್ಲಿ ಬಜೆಟ್‌ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಮಾರ್ಚ್.‌6ರಂದು ಬಜೆಟ್‌ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಮಾರ್ಚ್.‌5ರಿಂದ ಬಜೆಟ್‌ ಅಧಿವೇಶನ ಶುರುವಾಗುವ ಸಾಧ್ಯತೆ ಇದ್ದು, ಅಂದು ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕುರ್ಚಿ ಕಿತ್ತಾಟದ ಮಧ್ಯೆ ದಾಖಲೆಯ ಬಜೆಟ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನು ಈಗಾಗಲೇ ಮಂಡಿಸಿದ್ದು, ಮಾರ್ಚ್.‌6ರಂದು ಮಂಡಿಸುವ ಬಜೆಟ್‌ 17ನೇ ಬಜೆಟ್‌ ಆಗಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ : ಮುಖ್ಯ ಶಿಕ್ಷಕರು ಸೇರಿ 8 ಮಂದಿ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು,…

37 mins ago

ಹುಲಿ ದಾಳಿ ; ಹಸು ಸಾವು

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಸನಿಹದಲ್ಲಿರುವ ತೊಳಸಿಕೆರೆ ಗ್ರಾಮದ ದುಮ್ಮತಂಬಡಿ ಅವರಿಗೆ ಸೇರಿದ ಹಸು ಜಮೀನಿನಲ್ಲಿ ಮೇಯುತ್ತಿದ್ದಾಗ…

45 mins ago

ಜ.15ರಿಂದ ಐತಿಹಾಸಿಕ ಸುತ್ತೂರು ಜಾತ್ರೆ : 25 ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ನಂಜನಗೂಡು : ʻಹತ್ತೂರು ಜಾತ್ರೆಗೆ ಸುತ್ತೂರು ಜಾತ್ರೆʼ ಸಮ ಎಂಬ ಗಾದೆ ಹೊಂದಿರುವ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳ ಜಾತ್ರಾ…

58 mins ago

ರೈತನ ಮಗಳ ಸಾಧನೆ | ಮೈಸೂರು ವಿ.ವಿ ವ್ಯಾಪ್ತಿಯ ಬಿ.ಇಡಿ ಕಾಲೇಜಿಗೆ ಮೊದಲ ರ‍್ಯಾಂಕ್‌, ಚಿನ್ನದ ಪದಕ

ಕಿಕ್ಕೇರಿ : ಗ್ರಾಮೀಣ ಬದುಕಿನ ಸವಾಲುಗಳ ನಡುವೆ ಬೆಳೆದ ರೈತನ ಮಗಳು ತನ್ನ ಅಕ್ಷರಾಸಕ್ತಿಯಿಂದ ಇಡೀ ತಾಲ್ಲೂಕಿನ ಹೆಮ್ಮೆಯ ಮಗಳಾಗಿ…

1 hour ago

ಪಾಂಡವಪುರ | ಜಮೀನು ವಿವಾದ ; ವ್ಯಕ್ತಿ ಕೊಲೆ

ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ…

2 hours ago

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

3 hours ago