Mysore
33
overcast clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

nandibetta

ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

ನಿನ್ನೆಯೇ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಸಭೆ ರದ್ದಾಗಿ, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಯಿತು.

ಇದೀಗ ಬಂದ ಮಾಹಿತಿ ಪ್ರಕಾರ ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮುಂದಿನ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

Tags:
error: Content is protected !!