ರಾಜ್ಯ

ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.

ನಿನ್ನೆಯೇ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಸಭೆ ರದ್ದಾಗಿ, ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ ನಡೆಯಿತು.

ಇದೀಗ ಬಂದ ಮಾಹಿತಿ ಪ್ರಕಾರ ಜುಲೈ.2ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮುಂದಿನ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

1 hour ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

1 hour ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

1 hour ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

1 hour ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

2 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

2 hours ago