Narayan
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ದೇಶದಲ್ಲೇ ಮೂರನೇ ಸ್ಥಾನದಲ್ಲಿರುವ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಮೊದಲನೇ ಸ್ಥಾನಕ್ಕೆ ಕೊಂಡೊಯ್ಯಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರು ಹೇಳಿದರು.
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯ ಆಯೋಗದಲ್ಲಿ 7 ಸಾವಿರ ಜಿಲ್ಲಾ ಆಯೋಗದಲ್ಲಿ 7 ಸಾವಿರ ಪ್ರಕರಣಗಳು ಬಾಕಿ ಉಳಿದಿದ್ದು ಇವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮುಖಾಂತರ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಪ್ರಥಮ ಸ್ಥಾನಕ್ಕೇರಿಸುವ ಗುರಿ ಹೊಂದಲಾಗಿದೆ ಎಂದರು.
ಪ್ರಕರಣಗಳ ವಿಲೇವಾರಿ, ವಿಚಾರಣೆಗೆ ಡಿಜಿಟಲ್ ಸ್ಪರ್ಶ ನೀಡಲಾಗುವುದು. ಕಕ್ಷಿದಾರರು ಹಾಗೂ ಗ್ರಾಹಕರಿಗೆ ಶೀಘ್ರ ಮತ್ತು ಪಾರದರ್ಶಕವಾಗಿ ನ್ಯಾಯ ವಿತರಣೆ ಮಾಡಲಾಗುವುದು. ರಾಜ್ಯ ಆಯೋಗ ಮತ್ತು ಜಿಲ್ಲಾ ಆಯೋಗದ ಆದೇಶಗಳನ್ನು ಆ್ಯಪ್ ಗಳ ಮೂಲಕ ತಲುಪಿಸುವ ಕಾರ್ಯ ಮಾಡಲಾಗುವುದು ಎಂದರು.
ಆಯೋಗದ ಆದೇಶಗಳು ಮತ್ತು ಸಂಪೂರ್ಣ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತೆ ಮಾಡಲಾಗುವುದು. ಖಾಲಿಯಿರುವ ಹುದ್ದೆಗಳ ಭರ್ತಿಗೂ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ತನ್ನದೇ ಆದ ಇತಿಹಾಸವಿದೆ. ಮಾತಿಗಿಂತ ಕೃತಿ ಮುಖ್ಯ ಎಂದರು.
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷರಾದ ರವಿಶಂಕರ್ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಆಯೋಗದ ರಿಜಿಸ್ಟರ್ ಮಲ್ಲಿಕಾರ್ಜುನ ಎಮ್.ಕಮಟಗಿ, ಆಯೋಗದ ಸದಸ್ಯರಾದ ಸುನೀತಾ ಬಾಗೇವಾಡಿ ಸೇರಿದಂತೆ ಆಯೋಗದ ಸದಸ್ಯರು ಉಪಸ್ಥಿತರಿದ್ದರು.
ಸಚಿವ ಚಲುವರಾಯಸ್ವಾಮಿ, ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರನ್ನು ಕೃಷಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ದಿನೇಶ್ ಗೂಳಿಗೌಡ ಅವರು ಅಭಿನಂದಿಸಿ ಶುಭಕೋರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…