ಬೆಂಗಳೂರು: ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಆಯೋಗವು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ವಿದ್ಯುತ್ ಬಳಕೆದಾರರಿಗೆ ಪ್ರತಿ ಯೂನಿಟ್ಗ್ 1.10 ರೂ ಕಡಿತಮಾಡಿ ವಿದ್ಯುತ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ.
ಕೆಇಆರ್ಸಿ ವಿದ್ಯುತ್ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯೂನಿಟ್ಗಿಂತ ಹೆಚ್ಚು ಬಳಸುವವರ ಪ್ರತಿಯೂಬ್ಬರಿಗೆ ಈ ದರ ಅನ್ವವಾಗಲಿದೆ. ಈ ಮೂಲಕ 15 ವರ್ಷಗಳ ಬಳಿಕ ಮೊದಲ ಬಾರಿಗೆ ವಿದ್ಯುತ್ ದರ ಇಳಿಕೆಯಾಗಿದೆ.
ಇನ್ನು ರಾಜ್ಯ ಸರ್ಕಾರ 200 ಯುನಿಟ್ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.





