ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭ್ರಮೆಯಿಂದ ಹೊರಬಂದು ರಾಜ್ಯ ರೈತರ ವಿದ್ಯುತ್ ಸಂಕಷ್ಟದ ಕೊರತೆ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು (ಫೆ.21) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಅಸರ್ಮಪಕವಾಗಿದ್ದು ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ದಿನಪೂರ್ತಿ ವಿದ್ಯುತ್ ಪೂರೈಸುತ್ತೇವೆ ಎಂದು ಹೇಳುತ್ತೀರಿ.ಆದರೆ, ಕನಿಷ್ಠ 6 ಗಂಟೆ ವಿದ್ಯುತ್ ಪೂರೈಕೆ ಕೂಡ ಮಾಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರನ್ನು ಸಂಕಷ್ಟಕ್ಕೆ ದೂಡಬಾರದು. ಒಂದು ವೇಳೆ ವಿದ್ಯುತ್ ಆಭಾವವಿದ್ದರೆ ಹೊರ ರಾಜ್ಯಗಳಿಂದ ಖರೀದಿಸಿ ರೈತರ ವಿದ್ಯುತ್ ಆಭಾವ ದೂರಮಾಡಿ ಎಂದು ಹೇಳಿದರು.
ವಿಶ್ವವಿದ್ಯಾಲಯಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಇದು ಅವೈಜ್ಞಾನಿಕ ಮತ್ತು ಅವಿವೇಕದ ತೀರ್ಮಾನ. ಯಾವುದೇ ಕಾರಣಕ್ಕೂ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಬಿಡಿವುದಿಲ್ಲ. ಈ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ತಿಳಿಸಿದರು.
ಒಂದು ಜಿಲ್ಲೆ ಒಂದು ವಿಶ್ವವಿದ್ಯಾಲಯ ಪರಿಕಲ್ಪನೆಯಡಿ ಈ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಹಣಕಾಸಿನ ಬಿಕ್ಕಟ್ಟನ್ನೆ ಆಧಾರವಾಗಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಬಾರದು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…