ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಜಲಾಶಯಗಳು ಕೂಡ ಸಂಪೂರ್ಣ ಭರ್ತಿಯಾಗಿದ್ದು, ಅಪಾರ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭೂಕುಸಿತ ಪ್ರಕರಣಗಳು ವರದಿಯಾಗುತ್ತಿದ್ದು, ಅವುಗಳ ಬಗ್ಗೆಯೂ ಎಚ್ಚರ ವಹಿಸಬೇಕು. ಇದರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ಅಧಿಕಾರಿಗಳು ಎಲ್ಲಾ ಜಿಲ್ಲೆಗಳಲ್ಲಿಯೂ ಕಾಳಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ಎಲ್ಲಾ ಸೌಲಭ್ಯ ಕಲ್ಪಿಸಬೇಕು. ಈ ಮೂಲಕ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎಲ್ಲರೂ ಸಜ್ಜಾಗುವಂತೆ ಕರೆ ನೀಡಿದರು.
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…
ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…
೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…
ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…