ರಾಜ್ಯ

ಗುಜಾರಾತ್‌ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತಾ ರಾಜ್ಯ ಸರ್ಕಾರ; ಮುಂಜಾಗ್ರತಾ ಕ್ರಮ ವಹಿಸಲು ಡಿಸಿಎಂ ಸೂಚನೆ

ಬೆಂಗಳೂರು: ಗುಜರಾತ್‌ನಲ್ಲಿ ಶನಿವಾರ(ಮೇ.25) ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಕ್ಕಳು, ಮಹಿಳೆಯರು ಸೇರಿದಂತೆ 33 ಮಂದಿ ಸಜೀವ ದಹನವಾಗಿದ್ದಾರೆ. ಸದ್ಯ ಈ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ಬೆಂಗಳೂರಿನ ಮಾಲ್‌ ಮತ್ತು ಗೇಮಿಂಗ್‌ ಝೋನ್‌ಗಳಲ್ಲಿ ಕೆಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಈ ಕುರಿತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿರುವ ಡಿಸಿಎಂ ಡಿ.ಕೆ ಶಿವಕುಮಾರ್‌, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝೋನ್ ಹಾಗೂ ಸಾಹಸ ಕ್ರೀಡೆ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕು. ಅಹಿತಕರ ಬೆಂಕಿ ಅನಾಹುತಗಳನ್ನು ತಡೆಗಟ್ಟಲು ಸೂಕ್ತವಾದ ಸುರಕ್ಷತಾ ಕ್ರಮಗಳ ಮುನ್ನೆಚ್ಚರಿಕೆ ಅನುಸರಿಸಲು ಸೂಚನೆ ನೀಡಿದ್ದಾರೆ.

ಪತ್ರದಲ್ಲಿದಲ್ಲಿರುವುದು..

ಗುಜರಾತ್‌ನ ರಾಜ್ ಕೋಟ್‌ನ ಮನರಂಜನಾ ಕೇಂದ್ರದಲ್ಲಿ (ಗೇಮ್ ಝನ್) ಶನಿವಾರ ಸಂಜೆ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿರುವುದು ವರದಿಯಾಗಿದ್ದು, ಇದು ಅತ್ಯಂತ ಕಳವಳಿಕಾರಿ ದುರ್ಘಟನೆಯಾಗಿರುತ್ತದೆ. ಈ ದುರಂತವು ಎಲ್ಲರಿಗೂ ಎಚ್ಚರಿಕೆಯ ಗಂಟೆಯಾಗಿದ್ದು, ಬೆಂಗಳೂರಿನ ಹಲವು ಪ್ರತಿಷ್ಠಿತ ಮಾಲ್‌ಗಳಲ್ಲಿ ಮತ್ತು ಇತರೆ ಸ್ಥಳಗಳಲ್ಲಿ ಗೇಮ್ ಝನ್ ಹಾಗೂ ಸಾಹಸ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡಲಾಗಿದ್ದು, ಇಂತಹ ಮನರಂಜನಾ ಕೇಂದ್ರಗಳು / ಗೇಮ್ ಜೋನ್‌ಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಿರುತ್ತದೆ. ಮಜನರಂಜನಾ ಕೇಂದ್ರ/ ಗೇಮಿಂಗ್ ರೋನ್‌ಗಳಿರುವ ಪ್ರದೇಶದಲ್ಲಿ ಅಗ್ನಿದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಂಡು, ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಲು ಮತ್ತು ಈಗಾಗಲೇ ವಿಧಿಸಲಾಗಿರುವ ರಕ್ಷಣಾ ನಿಯಮ ಮತ್ತು ನಿರ್ಬಂಧಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಲು ತಿಳಿಸುತ್ತಾ, ಯಾವುದೇ ದುರ್ಘಟನೆಗಳು ಸಂಭವಿಸದಂತೆ ಕ್ರಮವಹಿಸಲು ಸೂಚಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

1 hour ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

3 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

3 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago