ರಾಜ್ಯ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ ರಜೆಯ ಪಟ್ಟಿಯಿಂದ ಹೊರಗಿಡಲಾಗಿದೆ. ಜ.15ರಂದು ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ, ಜ.26 ಗಣರಾಜ್ಯೋತ್ಸವ, ಮಾ.19 ಯುಗಾದಿ ಹಬ್ಬ, ಮಾ.21ರಂದು ಖುತುಬ್-ಎ-ರಂಜಾನ್, ಮಾ.31ರಂದು ಮಹಾವೀರ ಜಯಂತಿಗಳಂದು ಸಾರ್ವತ್ರಿಕ ರಜಾ ಘೋಷಿಸಲಾಗಿದೆ.

ಏ.3ರಂದು ಶುಭ ಶುಕ್ರವಾರ, ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಏ.20ರಂದು ಬಸವ ಜಯಂತಿ, ಅಕ್ಷಯ ತೃತೀಯ, ಮೇ 1ರಂದು ಕಾರ್ಮಿಕ ದಿನಾಚರಣೆ, ಮೇ28 ಬಕ್ರೀದ್, ಜೂ.26 ಮೊಹರಂ ಕಡೆ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.26ರಂದು ಈದ್ ಮಿಲಾದ್ ಸಾರ್ವತ್ರಕ ರಜಾ ದಿನಗಳಾಗಿವೆ.

ಸೆ.14ರಂದು ವರಸಿದ್ಧಿ ವಿನಾಯಕ ವ್ರತ, ಅ.2ರಂದು ಗಾಂಧಿ ಜಯಂತಿ, ಅ.20ರಂದು ಮಹಾನವಮಿ, ಆಯುಧಪೂಜೆ, ಅ.21ರಂದು ವಿಜಯದಶಮಿ, ನ.10ರಂದು ಬಲಿಪಾಡ್ಯಮಿ, ದೀಪಾವಳಿ, ನ.27ರಂದು ಕನಕದಾಸ ಜಯಂತಿ ಹಾಗೂ ಡಿ.25 ರಂದು ಕ್ರಿಸ್‍ಮಸ್ ಸಾರ್ವತ್ರಿಕ ರಜಾದಿನಗಳನ್ನಾಗಿ ಘೋಷಿಸಿದೆ.

ಫೆ.15ರಂದು ಮಹಾಶಿವರಾತ್ರಿ, ಅಕ್ಟೋಬರ್ 25ರಂದು ಮಹರ್ಷಿ ವಾಲೀಕಿ ಜಯಂತಿ, ನ.1ರಂದು ಕನ್ನಡ ರಾಜ್ಯೋತ್ಸವ ಭಾನುವಾರವೇ ಬರಲಿವೆ. ನ.11ರಂದು ನರಕ ಚತುರ್ದಶಿ ಅ.10ರಂದು ಮಹಾಲಯ ಅಮವಾಸ್ಯೆಯು ಎರಡನೇ ಶನಿವಾರಗಳಂದು ಬರಲಿವೆ. ಈ ರಜಾ ದಿನಗಳ ಸಂಧರ್ಭದಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಿರುತ್ತವೆ. ಸೆ.3ರಂದು ಕೈಲ್ ಮೂಹೂರ್ತ, ಅ.18ರಂದು ತುಲಾ ಸಂಕ್ರಮಣ, ನ.26ರಂದು ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಸಾರ್ವತ್ರಿಕ ರಜೆ ನೀಡಲಾಗಿದೆ.

ಪರಿಮಿತ ರಜೆಗಳು: ಜ.1ರಂದು ನೂತನ ವರ್ಷಾರಂಭ, ಜ.27ರಂದು ಮಧ್ವ ನವಮಿ, ಫೆ.4ರಂದು ಷಬ್-ಎ-ಬರಾತ್, ಮಾ.2ರಂದು ಹೋಳಿಹಬ್ಬ, ಮಾ. 17ರಂದು ಷಬ್-ಎ-ಖಾದರ್, ಮಾ.20ರಂದು ಜುಮತ್-ಉಲ-ವಿದಾ, ಮಾ. 23ರಂದು ದೇವರ ದಾಸಿಮಯ್ಯ ಜಯಂತಿ, ಮಾ.27ರಂದು ಶ್ರೀರಾಮ ನವಮಿ ಪರಿಮಿತಿ ರಜಾದಿನಗಳಾಗಿವೆ.

ಏ.4ರಂದು ಹೋಲಿ ಸ್ಯಾಟರ್ ಡೇ, ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ, ಏ.22ರಂದು ಶ್ರೀರಾಮಾನುಜಾಚಾರ್ಯ ಜಯಂತಿ, ಆ.21ರಂದು ಶ್ರೀ ವರಮಹಾಲಕ್ಷ್ಮೀ ವ್ರತ, ಆ.27ರಂದು ಯಜುರ್ ಉಪಕರ್ಮ, ಆ.28 ರಂದು ಬ್ರಹಶ್ರೀ ನಾರಾಯಣಗರು ಜಯಂತಿ, ರಕ್ಷಾ ಬಂಧನ, ಸೆ.4ರಂದು ಶ್ರೀ ಕೃಷ್ಣ ಜನಾಷ್ಠಮಿ, ಸೆ.8 ರಂದು ಕನ್ಯಾಕುಮಾರಿಯಮ್ಮ ಜಯಂತಿ, ಸೆ.17ರಂದು ವಿಶ್ವಕರ್ಮ ಜಯಂತಿ, ಸೆ.25ರಂದು ಶ್ರೀ ಅನಂತಪದನಾಭ ವ್ರತಗಳು ಸಹ ಪರಿಮಿತಿ ರಜಾದಿನಗಳ ಪಟ್ಟಿಯಲ್ಲಿವೆ.

ನ.24ರಂದು ಗುರುನಾನಕ್ ಜಯಂತ್, ನ.26 ರಂದು ಹುತ್ತರಿ ಹಬ್ಬ, ಡಿ.24ರಂದು ಕ್ರಿಸ್ ಈವ್ ಪರಿಮಿತ ರಜಾದಿನಗಳಾಗಿವೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

12 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

12 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

12 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago