ರಾಜ್ಯ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ ರಜೆಯ ಪಟ್ಟಿಯಿಂದ ಹೊರಗಿಡಲಾಗಿದೆ. ಜ.15ರಂದು ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ, ಜ.26 ಗಣರಾಜ್ಯೋತ್ಸವ, ಮಾ.19 ಯುಗಾದಿ ಹಬ್ಬ, ಮಾ.21ರಂದು ಖುತುಬ್-ಎ-ರಂಜಾನ್, ಮಾ.31ರಂದು ಮಹಾವೀರ ಜಯಂತಿಗಳಂದು ಸಾರ್ವತ್ರಿಕ ರಜಾ ಘೋಷಿಸಲಾಗಿದೆ.

ಏ.3ರಂದು ಶುಭ ಶುಕ್ರವಾರ, ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಏ.20ರಂದು ಬಸವ ಜಯಂತಿ, ಅಕ್ಷಯ ತೃತೀಯ, ಮೇ 1ರಂದು ಕಾರ್ಮಿಕ ದಿನಾಚರಣೆ, ಮೇ28 ಬಕ್ರೀದ್, ಜೂ.26 ಮೊಹರಂ ಕಡೆ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.26ರಂದು ಈದ್ ಮಿಲಾದ್ ಸಾರ್ವತ್ರಕ ರಜಾ ದಿನಗಳಾಗಿವೆ.

ಸೆ.14ರಂದು ವರಸಿದ್ಧಿ ವಿನಾಯಕ ವ್ರತ, ಅ.2ರಂದು ಗಾಂಧಿ ಜಯಂತಿ, ಅ.20ರಂದು ಮಹಾನವಮಿ, ಆಯುಧಪೂಜೆ, ಅ.21ರಂದು ವಿಜಯದಶಮಿ, ನ.10ರಂದು ಬಲಿಪಾಡ್ಯಮಿ, ದೀಪಾವಳಿ, ನ.27ರಂದು ಕನಕದಾಸ ಜಯಂತಿ ಹಾಗೂ ಡಿ.25 ರಂದು ಕ್ರಿಸ್‍ಮಸ್ ಸಾರ್ವತ್ರಿಕ ರಜಾದಿನಗಳನ್ನಾಗಿ ಘೋಷಿಸಿದೆ.

ಫೆ.15ರಂದು ಮಹಾಶಿವರಾತ್ರಿ, ಅಕ್ಟೋಬರ್ 25ರಂದು ಮಹರ್ಷಿ ವಾಲೀಕಿ ಜಯಂತಿ, ನ.1ರಂದು ಕನ್ನಡ ರಾಜ್ಯೋತ್ಸವ ಭಾನುವಾರವೇ ಬರಲಿವೆ. ನ.11ರಂದು ನರಕ ಚತುರ್ದಶಿ ಅ.10ರಂದು ಮಹಾಲಯ ಅಮವಾಸ್ಯೆಯು ಎರಡನೇ ಶನಿವಾರಗಳಂದು ಬರಲಿವೆ. ಈ ರಜಾ ದಿನಗಳ ಸಂಧರ್ಭದಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಿರುತ್ತವೆ. ಸೆ.3ರಂದು ಕೈಲ್ ಮೂಹೂರ್ತ, ಅ.18ರಂದು ತುಲಾ ಸಂಕ್ರಮಣ, ನ.26ರಂದು ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಸಾರ್ವತ್ರಿಕ ರಜೆ ನೀಡಲಾಗಿದೆ.

ಪರಿಮಿತ ರಜೆಗಳು: ಜ.1ರಂದು ನೂತನ ವರ್ಷಾರಂಭ, ಜ.27ರಂದು ಮಧ್ವ ನವಮಿ, ಫೆ.4ರಂದು ಷಬ್-ಎ-ಬರಾತ್, ಮಾ.2ರಂದು ಹೋಳಿಹಬ್ಬ, ಮಾ. 17ರಂದು ಷಬ್-ಎ-ಖಾದರ್, ಮಾ.20ರಂದು ಜುಮತ್-ಉಲ-ವಿದಾ, ಮಾ. 23ರಂದು ದೇವರ ದಾಸಿಮಯ್ಯ ಜಯಂತಿ, ಮಾ.27ರಂದು ಶ್ರೀರಾಮ ನವಮಿ ಪರಿಮಿತಿ ರಜಾದಿನಗಳಾಗಿವೆ.

ಏ.4ರಂದು ಹೋಲಿ ಸ್ಯಾಟರ್ ಡೇ, ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ, ಏ.22ರಂದು ಶ್ರೀರಾಮಾನುಜಾಚಾರ್ಯ ಜಯಂತಿ, ಆ.21ರಂದು ಶ್ರೀ ವರಮಹಾಲಕ್ಷ್ಮೀ ವ್ರತ, ಆ.27ರಂದು ಯಜುರ್ ಉಪಕರ್ಮ, ಆ.28 ರಂದು ಬ್ರಹಶ್ರೀ ನಾರಾಯಣಗರು ಜಯಂತಿ, ರಕ್ಷಾ ಬಂಧನ, ಸೆ.4ರಂದು ಶ್ರೀ ಕೃಷ್ಣ ಜನಾಷ್ಠಮಿ, ಸೆ.8 ರಂದು ಕನ್ಯಾಕುಮಾರಿಯಮ್ಮ ಜಯಂತಿ, ಸೆ.17ರಂದು ವಿಶ್ವಕರ್ಮ ಜಯಂತಿ, ಸೆ.25ರಂದು ಶ್ರೀ ಅನಂತಪದನಾಭ ವ್ರತಗಳು ಸಹ ಪರಿಮಿತಿ ರಜಾದಿನಗಳ ಪಟ್ಟಿಯಲ್ಲಿವೆ.

ನ.24ರಂದು ಗುರುನಾನಕ್ ಜಯಂತ್, ನ.26 ರಂದು ಹುತ್ತರಿ ಹಬ್ಬ, ಡಿ.24ರಂದು ಕ್ರಿಸ್ ಈವ್ ಪರಿಮಿತ ರಜಾದಿನಗಳಾಗಿವೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

2 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

4 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

4 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

5 hours ago