ರಾಜ್ಯ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ ರಜೆಯ ಪಟ್ಟಿಯಿಂದ ಹೊರಗಿಡಲಾಗಿದೆ. ಜ.15ರಂದು ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ, ಜ.26 ಗಣರಾಜ್ಯೋತ್ಸವ, ಮಾ.19 ಯುಗಾದಿ ಹಬ್ಬ, ಮಾ.21ರಂದು ಖುತುಬ್-ಎ-ರಂಜಾನ್, ಮಾ.31ರಂದು ಮಹಾವೀರ ಜಯಂತಿಗಳಂದು ಸಾರ್ವತ್ರಿಕ ರಜಾ ಘೋಷಿಸಲಾಗಿದೆ.

ಏ.3ರಂದು ಶುಭ ಶುಕ್ರವಾರ, ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಏ.20ರಂದು ಬಸವ ಜಯಂತಿ, ಅಕ್ಷಯ ತೃತೀಯ, ಮೇ 1ರಂದು ಕಾರ್ಮಿಕ ದಿನಾಚರಣೆ, ಮೇ28 ಬಕ್ರೀದ್, ಜೂ.26 ಮೊಹರಂ ಕಡೆ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.26ರಂದು ಈದ್ ಮಿಲಾದ್ ಸಾರ್ವತ್ರಕ ರಜಾ ದಿನಗಳಾಗಿವೆ.

ಸೆ.14ರಂದು ವರಸಿದ್ಧಿ ವಿನಾಯಕ ವ್ರತ, ಅ.2ರಂದು ಗಾಂಧಿ ಜಯಂತಿ, ಅ.20ರಂದು ಮಹಾನವಮಿ, ಆಯುಧಪೂಜೆ, ಅ.21ರಂದು ವಿಜಯದಶಮಿ, ನ.10ರಂದು ಬಲಿಪಾಡ್ಯಮಿ, ದೀಪಾವಳಿ, ನ.27ರಂದು ಕನಕದಾಸ ಜಯಂತಿ ಹಾಗೂ ಡಿ.25 ರಂದು ಕ್ರಿಸ್‍ಮಸ್ ಸಾರ್ವತ್ರಿಕ ರಜಾದಿನಗಳನ್ನಾಗಿ ಘೋಷಿಸಿದೆ.

ಫೆ.15ರಂದು ಮಹಾಶಿವರಾತ್ರಿ, ಅಕ್ಟೋಬರ್ 25ರಂದು ಮಹರ್ಷಿ ವಾಲೀಕಿ ಜಯಂತಿ, ನ.1ರಂದು ಕನ್ನಡ ರಾಜ್ಯೋತ್ಸವ ಭಾನುವಾರವೇ ಬರಲಿವೆ. ನ.11ರಂದು ನರಕ ಚತುರ್ದಶಿ ಅ.10ರಂದು ಮಹಾಲಯ ಅಮವಾಸ್ಯೆಯು ಎರಡನೇ ಶನಿವಾರಗಳಂದು ಬರಲಿವೆ. ಈ ರಜಾ ದಿನಗಳ ಸಂಧರ್ಭದಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಿರುತ್ತವೆ. ಸೆ.3ರಂದು ಕೈಲ್ ಮೂಹೂರ್ತ, ಅ.18ರಂದು ತುಲಾ ಸಂಕ್ರಮಣ, ನ.26ರಂದು ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಸಾರ್ವತ್ರಿಕ ರಜೆ ನೀಡಲಾಗಿದೆ.

ಪರಿಮಿತ ರಜೆಗಳು: ಜ.1ರಂದು ನೂತನ ವರ್ಷಾರಂಭ, ಜ.27ರಂದು ಮಧ್ವ ನವಮಿ, ಫೆ.4ರಂದು ಷಬ್-ಎ-ಬರಾತ್, ಮಾ.2ರಂದು ಹೋಳಿಹಬ್ಬ, ಮಾ. 17ರಂದು ಷಬ್-ಎ-ಖಾದರ್, ಮಾ.20ರಂದು ಜುಮತ್-ಉಲ-ವಿದಾ, ಮಾ. 23ರಂದು ದೇವರ ದಾಸಿಮಯ್ಯ ಜಯಂತಿ, ಮಾ.27ರಂದು ಶ್ರೀರಾಮ ನವಮಿ ಪರಿಮಿತಿ ರಜಾದಿನಗಳಾಗಿವೆ.

ಏ.4ರಂದು ಹೋಲಿ ಸ್ಯಾಟರ್ ಡೇ, ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ, ಏ.22ರಂದು ಶ್ರೀರಾಮಾನುಜಾಚಾರ್ಯ ಜಯಂತಿ, ಆ.21ರಂದು ಶ್ರೀ ವರಮಹಾಲಕ್ಷ್ಮೀ ವ್ರತ, ಆ.27ರಂದು ಯಜುರ್ ಉಪಕರ್ಮ, ಆ.28 ರಂದು ಬ್ರಹಶ್ರೀ ನಾರಾಯಣಗರು ಜಯಂತಿ, ರಕ್ಷಾ ಬಂಧನ, ಸೆ.4ರಂದು ಶ್ರೀ ಕೃಷ್ಣ ಜನಾಷ್ಠಮಿ, ಸೆ.8 ರಂದು ಕನ್ಯಾಕುಮಾರಿಯಮ್ಮ ಜಯಂತಿ, ಸೆ.17ರಂದು ವಿಶ್ವಕರ್ಮ ಜಯಂತಿ, ಸೆ.25ರಂದು ಶ್ರೀ ಅನಂತಪದನಾಭ ವ್ರತಗಳು ಸಹ ಪರಿಮಿತಿ ರಜಾದಿನಗಳ ಪಟ್ಟಿಯಲ್ಲಿವೆ.

ನ.24ರಂದು ಗುರುನಾನಕ್ ಜಯಂತ್, ನ.26 ರಂದು ಹುತ್ತರಿ ಹಬ್ಬ, ಡಿ.24ರಂದು ಕ್ರಿಸ್ ಈವ್ ಪರಿಮಿತ ರಜಾದಿನಗಳಾಗಿವೆ.

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

1 hour ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

1 hour ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

7 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

10 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

10 hours ago