ರಾಜ್ಯ

ರಾಜ್ಯ ಸರ್ಕಾರದಿಂದ 2026ರ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು 2026ನೇ ವರ್ಷಕ್ಕೆ 20 ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ 21 ದಿನಗಳ ಪರಿಮಿತಿ ರಜಾ ದಿನಗಳ ಪಟ್ಟಿಯನ್ನು ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಭಾನುವಾರದಂದು ಬರುವ ಹಬ್ಬಗಳನ್ನು ಸಾರ್ವತ್ರಿಕ ರಜೆಯ ಪಟ್ಟಿಯಿಂದ ಹೊರಗಿಡಲಾಗಿದೆ. ಜ.15ರಂದು ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ, ಜ.26 ಗಣರಾಜ್ಯೋತ್ಸವ, ಮಾ.19 ಯುಗಾದಿ ಹಬ್ಬ, ಮಾ.21ರಂದು ಖುತುಬ್-ಎ-ರಂಜಾನ್, ಮಾ.31ರಂದು ಮಹಾವೀರ ಜಯಂತಿಗಳಂದು ಸಾರ್ವತ್ರಿಕ ರಜಾ ಘೋಷಿಸಲಾಗಿದೆ.

ಏ.3ರಂದು ಶುಭ ಶುಕ್ರವಾರ, ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಏ.20ರಂದು ಬಸವ ಜಯಂತಿ, ಅಕ್ಷಯ ತೃತೀಯ, ಮೇ 1ರಂದು ಕಾರ್ಮಿಕ ದಿನಾಚರಣೆ, ಮೇ28 ಬಕ್ರೀದ್, ಜೂ.26 ಮೊಹರಂ ಕಡೆ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ ಹಾಗೂ ಆ.26ರಂದು ಈದ್ ಮಿಲಾದ್ ಸಾರ್ವತ್ರಕ ರಜಾ ದಿನಗಳಾಗಿವೆ.

ಸೆ.14ರಂದು ವರಸಿದ್ಧಿ ವಿನಾಯಕ ವ್ರತ, ಅ.2ರಂದು ಗಾಂಧಿ ಜಯಂತಿ, ಅ.20ರಂದು ಮಹಾನವಮಿ, ಆಯುಧಪೂಜೆ, ಅ.21ರಂದು ವಿಜಯದಶಮಿ, ನ.10ರಂದು ಬಲಿಪಾಡ್ಯಮಿ, ದೀಪಾವಳಿ, ನ.27ರಂದು ಕನಕದಾಸ ಜಯಂತಿ ಹಾಗೂ ಡಿ.25 ರಂದು ಕ್ರಿಸ್‍ಮಸ್ ಸಾರ್ವತ್ರಿಕ ರಜಾದಿನಗಳನ್ನಾಗಿ ಘೋಷಿಸಿದೆ.

ಫೆ.15ರಂದು ಮಹಾಶಿವರಾತ್ರಿ, ಅಕ್ಟೋಬರ್ 25ರಂದು ಮಹರ್ಷಿ ವಾಲೀಕಿ ಜಯಂತಿ, ನ.1ರಂದು ಕನ್ನಡ ರಾಜ್ಯೋತ್ಸವ ಭಾನುವಾರವೇ ಬರಲಿವೆ. ನ.11ರಂದು ನರಕ ಚತುರ್ದಶಿ ಅ.10ರಂದು ಮಹಾಲಯ ಅಮವಾಸ್ಯೆಯು ಎರಡನೇ ಶನಿವಾರಗಳಂದು ಬರಲಿವೆ. ಈ ರಜಾ ದಿನಗಳ ಸಂಧರ್ಭದಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮುಚ್ಚಿರುತ್ತವೆ. ಸೆ.3ರಂದು ಕೈಲ್ ಮೂಹೂರ್ತ, ಅ.18ರಂದು ತುಲಾ ಸಂಕ್ರಮಣ, ನ.26ರಂದು ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಅನ್ವಯವಾಗುವಂತೆ ಸಾರ್ವತ್ರಿಕ ರಜೆ ನೀಡಲಾಗಿದೆ.

ಪರಿಮಿತ ರಜೆಗಳು: ಜ.1ರಂದು ನೂತನ ವರ್ಷಾರಂಭ, ಜ.27ರಂದು ಮಧ್ವ ನವಮಿ, ಫೆ.4ರಂದು ಷಬ್-ಎ-ಬರಾತ್, ಮಾ.2ರಂದು ಹೋಳಿಹಬ್ಬ, ಮಾ. 17ರಂದು ಷಬ್-ಎ-ಖಾದರ್, ಮಾ.20ರಂದು ಜುಮತ್-ಉಲ-ವಿದಾ, ಮಾ. 23ರಂದು ದೇವರ ದಾಸಿಮಯ್ಯ ಜಯಂತಿ, ಮಾ.27ರಂದು ಶ್ರೀರಾಮ ನವಮಿ ಪರಿಮಿತಿ ರಜಾದಿನಗಳಾಗಿವೆ.

ಏ.4ರಂದು ಹೋಲಿ ಸ್ಯಾಟರ್ ಡೇ, ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ, ಏ.22ರಂದು ಶ್ರೀರಾಮಾನುಜಾಚಾರ್ಯ ಜಯಂತಿ, ಆ.21ರಂದು ಶ್ರೀ ವರಮಹಾಲಕ್ಷ್ಮೀ ವ್ರತ, ಆ.27ರಂದು ಯಜುರ್ ಉಪಕರ್ಮ, ಆ.28 ರಂದು ಬ್ರಹಶ್ರೀ ನಾರಾಯಣಗರು ಜಯಂತಿ, ರಕ್ಷಾ ಬಂಧನ, ಸೆ.4ರಂದು ಶ್ರೀ ಕೃಷ್ಣ ಜನಾಷ್ಠಮಿ, ಸೆ.8 ರಂದು ಕನ್ಯಾಕುಮಾರಿಯಮ್ಮ ಜಯಂತಿ, ಸೆ.17ರಂದು ವಿಶ್ವಕರ್ಮ ಜಯಂತಿ, ಸೆ.25ರಂದು ಶ್ರೀ ಅನಂತಪದನಾಭ ವ್ರತಗಳು ಸಹ ಪರಿಮಿತಿ ರಜಾದಿನಗಳ ಪಟ್ಟಿಯಲ್ಲಿವೆ.

ನ.24ರಂದು ಗುರುನಾನಕ್ ಜಯಂತ್, ನ.26 ರಂದು ಹುತ್ತರಿ ಹಬ್ಬ, ಡಿ.24ರಂದು ಕ್ರಿಸ್ ಈವ್ ಪರಿಮಿತ ರಜಾದಿನಗಳಾಗಿವೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago