ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾತಿಗಣತಿಯ ಕುರಿತು ಕಿಡಿಕಾರಿದ್ದು, ವೀರಶೈವ ಲಿಂಗಾಯತರನ್ನು ಹೊರತುಪಡಿಸಿ ರಾಜ್ಯ ಆಳುವುದು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಇನ್ನೂ ಮುಂದುವರೆದು ಯಾಕೆ ಸಾಧ್ಯವಿಲ್ಲ ಎಂಬುದಕ್ಕೆ ಕಾರಣ ತಿಳಿಸಿದ ಬೊಮ್ಮಾಯಿ ಏಕೆಂದರೆ ನಮ್ಮೊಂದಿಗೆ ಎಲ್ಲಾ ತಳ ಸಮಯದಾಯ ಸೇರಿವೆ ಎಂದು ಹೇಳಿದ್ದಾರೆ. ನಮ್ಮೊಂದಿಗಿರುವ ಒಳಪಂಗಡಗಳನ್ನು ಬೇರ್ಪಡಿಸುವ ಕೆಲಸ ನಡೆದಿತ್ತು. ಸಂಸ್ಕಾರದ ತಿರುಳು ನಮ್ಮಲ್ಲಿ ಗಟ್ಟಿಯಾಗಿ ಉಳಿದಿದೆ. ಜಾತಿಗಣಗೆ ಬಗ್ಗೆ ಸ್ಪಷ್ಟ ನಿಲುವಿರಬೇಕು. ಶಿಕ್ಷಣ, ಆರ್ಥಿಕತೆ, ಸ್ಥಿತಿಗತಿ ಬಗ್ಗೆ ಜಾತಿಗಣತಿ ನಡೆದಿದೆ. ಜಾತಿಗಣತಿ ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಸಮಾಜದಲ್ಲಿ ಗೊಂದಲ ನಿರ್ಮಾಣವಾಗಬಾರದು, ಪಾರದರ್ಶಕ, ವೈಜ್ಞಾನಿಕ ಜಾತಿಗಣತಿ ಆಗಬೇಕು, ಸಮಾಜಕ್ಕೆ ಅನ್ಯಾಯವಾಗರಬಾರದು ಎಂದು ಬೊಮ್ಮಾಯಿ ಹೇಳಿದರು.
ಇತ್ತೀಚಿನ ದಿನಗಳಲ್ಲಿ ಜಾತಿಗಣತಿ ಮಾಡುವ ಹೆಸರಿನಲ್ಲಿ ಪ್ರತ್ಯೇಕ ಮಾಡುವ ಕೆಲಸ ನಡೆದಿದೆ, ಅದು ಸಾಧ್ಯವಿಲ್ಲ. ಈಗ ಕರ್ನಾಟಕದಲ್ಲಿ ಆಗಿರುವುದು ಜಾತಿಗಣತಿ ಅಲ್ಲ, ಅದು ಶೈಕ್ಷಣಿಕ ಆರ್ಥಿಕ ಸಮೀಕ್ಷೆ, ಜಾತಿಗಣತಿ ಮಾಡುವ ಹಕ್ಕು ರಾಜ್ಯ ಸರ್ಕಾರಕ್ಕೆ ಇಲ್ಲ, ಅದು ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ, ಜಾತಿಗಣತಿ ವೈಜ್ಞಾನಿಕವಾಗಿ ನಡೆಯಬೇಕಿದೆ ಎಂದು ಬೊಮ್ಮಾಯಿ ತಿಳಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…