ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು ಹಾಗೂ ಸೂಚನಾ ಫಲಕಗಳಲ್ಲಿಯೂ ಕನ್ನಡವನ್ನು ಹೆಚ್ಚಾಗಿ ಬಳಕೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ ಸುಗ್ರೀವಾಜ್ಞೆ ಮೂಲಕ ಕನ್ನಡ ಕಡ್ಡಾಯ ಮಾಡುವುದಾಗಿ ತಿಳಿಸಿದ್ದರು. ಅಲ್ಲದೇ ಸುಗ್ರೀವಾಜ್ಞೆಯ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನಿನ ಅನ್ವಯ 2024ರ ಫೆಬ್ರವರಿ 28ರ ಒಳಗೆ ರಾಜ್ಯದಲ್ಲಿನ ಎಲ್ಲಾ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಹೊಟೇಲ್ ಹಾಗೂ ಮುಂತಾದವುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡವನ್ನು ಬಳಸಬೇಕು, ಉಳಿದ 40% ಜಾಗದಲ್ಲಿ ಇತರೆ ಭಾಷೆ ಇರಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಅದರಂತೆ ನಿನ್ನೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದ್ದು, ರಾಜ್ಯಪಾಲರ ಅನುಮೋದನೆ ಬಿದ್ದ ಕೂಡಲೇ ಈ ತಿದ್ದುಪಡಿ ನಿಯಮ ಜಾರಿಗೆ ಬರಲಿದೆ.
ಏನಿದು ತಿದ್ದುಪಡಿ?
ಈ ಹಿಂದೆ 2023ರ ಮಾರ್ಚ್ನಲ್ಲಿ ಬಿಜೆಪಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್ 17 ( 6 ) ರ ಅಡಿಯಲ್ಲಿ ನಾಮಫಲಕಗಳಲ್ಲಿ ಶೇ.50 ರಷ್ಟು ಕನ್ನಡ ಇರಬೇಕು ಎಂದು ತಿಳಿಸಿತ್ತು. ಇದೀಗ ಈ ಕಾಯಿದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಲಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…