ರಾಜ್ಯ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರದ ನಿರ್ಧಾರ

ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು ಹಾಗೂ ಸೂಚನಾ ಫಲಕಗಳಲ್ಲಿಯೂ ಕನ್ನಡವನ್ನು ಹೆಚ್ಚಾಗಿ ಬಳಕೆ ಮಾಡಬೇಕು ಎಂದು ನಿರ್ಧರಿಸಲಾಗಿದೆ.

ಕಳೆದ ಕೆಲ ದಿನಗಳ ಹಿಂದಷ್ಟೇ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ್ದ ಸಿದ್ದರಾಮಯ್ಯ ಸುಗ್ರೀವಾಜ್ಞೆ ಮೂಲಕ ಕನ್ನಡ ಕಡ್ಡಾಯ ಮಾಡುವುದಾಗಿ ತಿಳಿಸಿದ್ದರು. ಅಲ್ಲದೇ ಸುಗ್ರೀವಾಜ್ಞೆಯ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನಿನ ಅನ್ವಯ 2024ರ ಫೆಬ್ರವರಿ 28ರ ಒಳಗೆ ರಾಜ್ಯದಲ್ಲಿನ ಎಲ್ಲಾ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನರಂಜನಾ ಕೇಂದ್ರ ಹೊಟೇಲ್‌ ಹಾಗೂ ಮುಂತಾದವುಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಕನ್ನಡವನ್ನು ಬಳಸಬೇಕು, ಉಳಿದ 40% ಜಾಗದಲ್ಲಿ ಇತರೆ ಭಾಷೆ ಇರಬೇಕು ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಅದರಂತೆ ನಿನ್ನೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದ್ದು, ರಾಜ್ಯಪಾಲರ ಅನುಮೋದನೆ ಬಿದ್ದ ಕೂಡಲೇ ಈ ತಿದ್ದುಪಡಿ ನಿಯಮ ಜಾರಿಗೆ ಬರಲಿದೆ.

ಏನಿದು ತಿದ್ದುಪಡಿ?

ಈ ಹಿಂದೆ 2023ರ ಮಾರ್ಚ್‌ನಲ್ಲಿ ಬಿಜೆಪಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17 ( 6 ) ರ ಅಡಿಯಲ್ಲಿ ನಾಮಫಲಕಗಳಲ್ಲಿ ಶೇ.50 ರಷ್ಟು ಕನ್ನಡ ಇರಬೇಕು ಎಂದು ತಿಳಿಸಿತ್ತು. ಇದೀಗ ಈ ಕಾಯಿದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದ್ದು ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಲಿದೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago