ರಾಜ್ಯ

ಸೆಪ್ಟೆಂಬರ್.‌22ರಿಂದ ಮರು ಜಾತಿಗಣತಿ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್.22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು.

ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ. ಇದರಂತೆ ರಾಜ್ಯದ 7 ಕೋಟಿ ಜನರ ಸಮೀಕ್ಷೆ ನಡೆಸಲಾಗುವುದು. ಜಾತಿ ತಾರತಮ್ಯ ನಿವಾರಣೆ ಮಾಡುವುದು ಗಣತಿಯ ಮುಖ್ಯ ಉದ್ದೇಶ ಎಂದರು.

ರಾಜ್ಯದ ಪ್ರತಿಯೊಬ್ಬರ ಆರ್ಥಿಕ ಪರಿಸ್ಥಿತಿ, ಜಮೀನಿನ ಒಡೆತನ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಸಲಾಗುವುದು. ಈ ಸಮೀಕ್ಷೆ ವರದಿ ಮುಂದಿನ ಬಜೆಟ್ ಸಿದ್ಧಪಡಿಸುವ ಸಂದರ್ಭದಲ್ಲಿ ಆಧಾರವಾಗಲಿದೆ. ಈ ಬಾರಿಯ ಸಮೀಕ್ಷೆ ದೇಶದಲ್ಲೇ ಮಾದರಿ ಸಮೀಕ್ಷೆಯಾಗಬೇಕು ಎಂದು ತಿಳಿಸಿದರು.

ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಸವುದಾಗಿ ತಿಳಿಸಿರುವ ಅವರು, ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ಕಾಂತರಾಜು ಆಯೋಗ 54 ಪ್ರಶ್ನೆಗಳನ್ನು ಸಿದ್ದಪಡಿಸಿ ಆಗ ಸಮೀಕ್ಷೆ ನಡೆಸಿತ್ತು. ಈ ಬಾರಿಯ ಸಮೀಕ್ಷೆಯಲ್ಲಿ ಇನ್ನಷ್ಟು ಅಂಶಗಳನ್ನು ಸೇರಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಜೊತೆಗೆ ಮೊಬೈಲ್ ಆಪ್ ಬಳಸಿಕೊಂಡು ಸಮೀಕ್ಷೆ ನಡೆಸಲಾಗುವುದು ಎಂದರು.

ಸಮೀಕ್ಷೆ ವೈಜ್ಞಾನಿಕವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕಿದೆ. ಸಮೀಕ್ಷೆಯಲ್ಲಿ ಕೇಳಬೇಕಾದ ಪ್ರಶ್ನೆಗಳನ್ನು ಅಂತಿಮಗೊಳಿಸಲು ತಜ್ಞರ ಸಮಿತಿಯ ನೆರವು ಪಡೆಯಬೇಕು ಎಂದು ಆದೇಶಿಸಿದ್ದಾರೆ.

ಈ ಬಾರಿ ಸಮೀಕ್ಷೆ ಕಾರ್ಯಕ್ಕೆ 1.65 ಲಕ್ಷ ಗಣತಿದಾರರು ಸೇರಿದಂತೆ ಮಾನವ ಸಂಪನ್ಮೂಲ ಅವಶ್ಯಕತೆಯಿದ್ದು, ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಸೇವೆಯೊಂದಿಗೆ ಇತರ ಇಲಾಖೆಗಳ ಸಿಬ್ಬಂದಿಗಳನ್ನು ಸಹ ಬಳಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ ಆರ್ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

55 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago