State Employees Day Celebration siddaramaiah
ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.
ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಇದನ್ನೂ ಓದಿ:- ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, u ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಸಿಎಂ
ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.
ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.
5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ಥಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.
ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರಟು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…
ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…
ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.…
ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ. ಈ ಯೋಜನೆಯು…
ಚಿತ್ರದುರ್ಗ: ಸಿಎಂ ಸ್ಥಾನಕ್ಕಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು…