ರಾಜ್ಯ

ಪ್ರಮಾಣಿಕ ಕರ್ತವ್ಯಪ್ರಜ್ಞೆ ; ಸರ್ಕಾರಿ ನೌಕರರ ಬಗ್ಗೆ ಸಿಎಂ ಮೆಚ್ಚುಗೆ

ಬೆಂಗಳೂರು : ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಇದನ್ನೂ ಓದಿ:- ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು, u ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಸಿಎಂ

ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ ಎಂದರು.

ಬುದ್ದ, ಬಸವ, ಗಾಂಧಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.

5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ಥಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದರು.

ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರಟು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

14 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

34 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

38 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago