ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಈ ಸರ್ಕಾರದಲ್ಲಿ ಬರೀ ಭ್ರಷ್ಟಾಚಾರ ನಡೆಯುತ್ತಿದೆ. ಭ್ರಷ್ಟಾಚಾರ ಬಿಟ್ಟರೇ ಬೇರೆ ಯಾವುದೇ ಯೋಜನೆಗಳು ನಡೆಯುತ್ತಿಲ್ಲ. ಯಡಿಯೂರಪ್ಪ ಸರ್ಕಾರ ಇದ್ದಾಗ ಬಡವರಿಗೆ ಅನೇಕ ಯೋಜನೆಗಳು ಇದ್ದವು. ಅವೆಲ್ಲವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಇದೆಲ್ಲದರ ವಿರುದ್ಧ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತದೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ನರೇಗಾ ಅನುದಾನ ವಿಳಂಬದ ಬಗ್ಗೆ ಬಿಜೆಪಿಗರು ಮಾತಾಡಲಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇನ್ನು ವಸತಿ ನಿಗಮದಲ್ಲಿ ನಡೆದಿರುವ ಗೋಲ್ಮಾಲ್ ವಿಚಾರ ಪ್ರಸ್ತಾಪಿಸಿರುವ ಶಾಸಕ ಬಿ.ಆರ್.ಪಾಟೀಲ್ಗೆ ಕಾಂಗ್ರೆಸ್ ನಾಯಕರೇ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಂಭೀರ ಆರೋಪ ಮಾಡಿದರು.
ಪಾಟೀಲ್ ಅವರು ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು. ಅಲ್ಲಿಯೂ ಸಹ ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ. ಹೀಗಾಗಿ ಪಾಟೀಲ್ರನ್ನು ಆಡಳಿತ ಪಕ್ಷದ ನಾಯಕರೇ ಬೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…
ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…