ರಾಜ್ಯ

ರಾಜ್ಯ ಸರ್ಕಾರದಿಂದ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ ಅತ್ಯವಶ್ಯಕವಾಗಿದ್ದು, ರಾಮನಗರ ಜಿಲ್ಲೆಗೆ ನೀರನ್ನು ಹರಿಸುವ ರಾಜ್ಯಸರ್ಕಾರದ ಧೋರಣೆ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.

ನೆರೆಯ ಆಂಧ್ರಪ್ರದೇಶ ಈಗಾಗಲೇ ಕೃಷ್ಣಾ ನದಿ ನೀರನ್ನು ಕೋಲಾರ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗಗಳಿಗೆ ಹರಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಹೇಮಾವತಿ ನೀರನ್ನು ರಾಮನಗರಕ್ಕೆ ಬಳಸುವ ಯೋಜನೆ ರೂಪಿಸಿರುವುದು ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಪ್ರಸ್ತುತ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೆ ಯೋಜನೆ ರೂಪಿಸಿರುವುದರ ಹಿಂದೆ ಅಡಗಿರುವ ಮರ್ಮ ಏನೆಂದು ಎಲ್ಲರಿಗೂ ತಿಳಿಯುತ್ತದೆ. ಜನರ ಮಧ್ಯೆ ಗೊಂದಲ, ದ್ವೇಷ ಭಾವನೆ ಮೂಡಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

5 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

6 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

7 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

7 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

7 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

8 hours ago