ರಾಜ್ಯ

ರಾಜ್ಯ ಸರ್ಕಾರದಿಂದ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ ಅತ್ಯವಶ್ಯಕವಾಗಿದ್ದು, ರಾಮನಗರ ಜಿಲ್ಲೆಗೆ ನೀರನ್ನು ಹರಿಸುವ ರಾಜ್ಯಸರ್ಕಾರದ ಧೋರಣೆ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.

ನೆರೆಯ ಆಂಧ್ರಪ್ರದೇಶ ಈಗಾಗಲೇ ಕೃಷ್ಣಾ ನದಿ ನೀರನ್ನು ಕೋಲಾರ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗಗಳಿಗೆ ಹರಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಹೇಮಾವತಿ ನೀರನ್ನು ರಾಮನಗರಕ್ಕೆ ಬಳಸುವ ಯೋಜನೆ ರೂಪಿಸಿರುವುದು ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಪ್ರಸ್ತುತ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೆ ಯೋಜನೆ ರೂಪಿಸಿರುವುದರ ಹಿಂದೆ ಅಡಗಿರುವ ಮರ್ಮ ಏನೆಂದು ಎಲ್ಲರಿಗೂ ತಿಳಿಯುತ್ತದೆ. ಜನರ ಮಧ್ಯೆ ಗೊಂದಲ, ದ್ವೇಷ ಭಾವನೆ ಮೂಡಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

26 mins ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

27 mins ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

29 mins ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

30 mins ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

32 mins ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

37 mins ago