ರಾಜ್ಯ

ರಾಜ್ಯ ಸರ್ಕಾರದಿಂದ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ ಅತ್ಯವಶ್ಯಕವಾಗಿದ್ದು, ರಾಮನಗರ ಜಿಲ್ಲೆಗೆ ನೀರನ್ನು ಹರಿಸುವ ರಾಜ್ಯಸರ್ಕಾರದ ಧೋರಣೆ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.

ನೆರೆಯ ಆಂಧ್ರಪ್ರದೇಶ ಈಗಾಗಲೇ ಕೃಷ್ಣಾ ನದಿ ನೀರನ್ನು ಕೋಲಾರ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗಗಳಿಗೆ ಹರಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಹೇಮಾವತಿ ನೀರನ್ನು ರಾಮನಗರಕ್ಕೆ ಬಳಸುವ ಯೋಜನೆ ರೂಪಿಸಿರುವುದು ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದರು.

ಪ್ರಸ್ತುತ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೆ ಯೋಜನೆ ರೂಪಿಸಿರುವುದರ ಹಿಂದೆ ಅಡಗಿರುವ ಮರ್ಮ ಏನೆಂದು ಎಲ್ಲರಿಗೂ ತಿಳಿಯುತ್ತದೆ. ಜನರ ಮಧ್ಯೆ ಗೊಂದಲ, ದ್ವೇಷ ಭಾವನೆ ಮೂಡಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

48 mins ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

53 mins ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

57 mins ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

2 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

3 hours ago