shobha karandlaje
ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ ಅತ್ಯವಶ್ಯಕವಾಗಿದ್ದು, ರಾಮನಗರ ಜಿಲ್ಲೆಗೆ ನೀರನ್ನು ಹರಿಸುವ ರಾಜ್ಯಸರ್ಕಾರದ ಧೋರಣೆ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.
ನೆರೆಯ ಆಂಧ್ರಪ್ರದೇಶ ಈಗಾಗಲೇ ಕೃಷ್ಣಾ ನದಿ ನೀರನ್ನು ಕೋಲಾರ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗಗಳಿಗೆ ಹರಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಹೇಮಾವತಿ ನೀರನ್ನು ರಾಮನಗರಕ್ಕೆ ಬಳಸುವ ಯೋಜನೆ ರೂಪಿಸಿರುವುದು ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದರು.
ಪ್ರಸ್ತುತ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೆ ಯೋಜನೆ ರೂಪಿಸಿರುವುದರ ಹಿಂದೆ ಅಡಗಿರುವ ಮರ್ಮ ಏನೆಂದು ಎಲ್ಲರಿಗೂ ತಿಳಿಯುತ್ತದೆ. ಜನರ ಮಧ್ಯೆ ಗೊಂದಲ, ದ್ವೇಷ ಭಾವನೆ ಮೂಡಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…