shobha karandlaje
ಬೆಂಗಳೂರು: ಹೇಮಾವತಿ ನೀರು ಹಂಚಿಕೆ ವಿಷಯದಲ್ಲಿ ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಭಾಗದ ತಾಲ್ಲೂಕುಗಳಿಗೆ ಹೇಮಾವತಿ ಅತ್ಯವಶ್ಯಕವಾಗಿದ್ದು, ರಾಮನಗರ ಜಿಲ್ಲೆಗೆ ನೀರನ್ನು ಹರಿಸುವ ರಾಜ್ಯಸರ್ಕಾರದ ಧೋರಣೆ ಜನವಿರೋಧಿಯಾಗಿದೆ ಎಂದು ಆರೋಪಿಸಿದರು.
ನೆರೆಯ ಆಂಧ್ರಪ್ರದೇಶ ಈಗಾಗಲೇ ಕೃಷ್ಣಾ ನದಿ ನೀರನ್ನು ಕೋಲಾರ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗಗಳಿಗೆ ಹರಿಸಿದೆ. ಆದರೆ ಕಾಂಗ್ರೆಸ್ ಸರ್ಕಾರ ಅದರ ಬಗ್ಗೆ ಗಮನ ಹರಿಸುವುದನ್ನು ಬಿಟ್ಟು ಹೇಮಾವತಿ ನೀರನ್ನು ರಾಮನಗರಕ್ಕೆ ಬಳಸುವ ಯೋಜನೆ ರೂಪಿಸಿರುವುದು ಜನರ ಮಧ್ಯೆ ದ್ವೇಷ ಮೂಡಿಸುವ ಹುನ್ನಾರ ಮಾಡುತ್ತಿದೆ ಎಂದು ಕಿಡಿಕಾರಿದರು.
ಪ್ರಸ್ತುತ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದರು. ಆದರೆ ಅದನ್ನು ಲೆಕ್ಕಿಸದೆ ಯೋಜನೆ ರೂಪಿಸಿರುವುದರ ಹಿಂದೆ ಅಡಗಿರುವ ಮರ್ಮ ಏನೆಂದು ಎಲ್ಲರಿಗೂ ತಿಳಿಯುತ್ತದೆ. ಜನರ ಮಧ್ಯೆ ಗೊಂದಲ, ದ್ವೇಷ ಭಾವನೆ ಮೂಡಿಸುವುದನ್ನು ಬಿಟ್ಟು ರಾಜ್ಯ ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಸಲಹೆ ನೀಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…