ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಕಿಲೋಗೆ ಕನಿಷ್ಠ 22.50 ರೂ.ಗೆ ಅಕ್ಕಿ ನೀಡುತ್ತೇವೆ ಎಂದರು ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ಕಿಲೋಗೆ 22.50 ರೂಗೆ ಅಕ್ಕಿ ನೀಡುವ ಮೂಲಕ 10 ರೂ. ರಿಯಾಯಿತಿ ನೀಡುತ್ತಿದೆ. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರ ಸ್ವೀಕರಿಸಲು ಸಿದ್ದವಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಪ್ರಸ್ತುತ ಪ್ರತಿ ಕಿಲೋಗೆ 34ರೂ. ನೀಡಿ ಅಕ್ಕಿ ಖರೀದಿಸುತ್ತಿದೆ. ಕೇಂದ್ರ ಸರ್ಕಾರ ನೀಡುವ ದರದಲ್ಲಿ ಅಕ್ಕಿ ಖರೀದಿಸಿದರೆ, ವಾರ್ಷಿಕವಾಗಿ 2,280 ಕೋಟಿ ರೂ. ಉಳಿಸಬಹುದು. ಆದರೆ, ಉದ್ದೇಶಪೂರ್ವಕವಾಗಿಯೇ ಈ ಅವಕಾಶವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದ ಹಣ ಫಲಾನುಭವಿಗಳ ಖಾತೆಗೆ ಇನ್ನು ಜಮಾವಣೆ ಆಗಿಲ್ಲ. ರಾಜ್ಯ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಸಚಿವ ಮುನಿಯಪ್ಪ ಭೇಟಿ ಮಾಡಿ ಹೋದರೂ ಅಕ್ಕಿ ಆರ್ಡರ್ ಮಾಡಿಲ್ಲ. ಏಕೆಂದರೆ ಖರೀದಿಸಲು ಅವರ ಬಳಿ ದುಡ್ಡಿಲ್ಲ ಎಂದು ವ್ಯಂಗ್ಯವಾಡಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…