ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಕಿಲೋಗೆ ಕನಿಷ್ಠ 22.50 ರೂ.ಗೆ ಅಕ್ಕಿ ನೀಡುತ್ತೇವೆ ಎಂದರು ರಾಜ್ಯ ಸರ್ಕಾರ ನಮ್ಮಿಂದ ಅಕ್ಕಿ ಖರೀದಿಸುತ್ತಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ಕಿಲೋಗೆ 22.50 ರೂಗೆ ಅಕ್ಕಿ ನೀಡುವ ಮೂಲಕ 10 ರೂ. ರಿಯಾಯಿತಿ ನೀಡುತ್ತಿದೆ. ಆದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರ ಸ್ವೀಕರಿಸಲು ಸಿದ್ದವಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಪ್ರಸ್ತುತ ಪ್ರತಿ ಕಿಲೋಗೆ 34ರೂ. ನೀಡಿ ಅಕ್ಕಿ ಖರೀದಿಸುತ್ತಿದೆ. ಕೇಂದ್ರ ಸರ್ಕಾರ ನೀಡುವ ದರದಲ್ಲಿ ಅಕ್ಕಿ ಖರೀದಿಸಿದರೆ, ವಾರ್ಷಿಕವಾಗಿ 2,280 ಕೋಟಿ ರೂ. ಉಳಿಸಬಹುದು. ಆದರೆ, ಉದ್ದೇಶಪೂರ್ವಕವಾಗಿಯೇ ಈ ಅವಕಾಶವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದ್ದ ಹಣ ಫಲಾನುಭವಿಗಳ ಖಾತೆಗೆ ಇನ್ನು ಜಮಾವಣೆ ಆಗಿಲ್ಲ. ರಾಜ್ಯ ಸರ್ಕಾರ ದಿವಾಳಿ ಹಂತಕ್ಕೆ ತಲುಪಿದೆ. ಸಚಿವ ಮುನಿಯಪ್ಪ ಭೇಟಿ ಮಾಡಿ ಹೋದರೂ ಅಕ್ಕಿ ಆರ್ಡರ್ ಮಾಡಿಲ್ಲ. ಏಕೆಂದರೆ ಖರೀದಿಸಲು ಅವರ ಬಳಿ ದುಡ್ಡಿಲ್ಲ ಎಂದು ವ್ಯಂಗ್ಯವಾಡಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…