ರಾಜ್ಯ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಉಮಾದೇವಿ ಅವರು, ಕರ್ನಾಟಕ ರಾಜ್ಯದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಪ್ರತಿಯೊಂದು ಕೂಡ ಬೇರೆ ಭಾಷೆಯೊಂದಿಗೆ ಕನ್ನಡದಲ್ಲಿಯೂ ಇರಬೇಕು ಎಂದು ಉಲ್ಲೇಖಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ಸರ್ಕಾರವೂ, ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯೊಂದಿಗೆ ಕನ್ನಡದಲ್ಲಿಯೂ ಸಹ ಇರಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

28 mins ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

51 mins ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

1 hour ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

1 hour ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

2 hours ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

3 hours ago