ರಾಜ್ಯ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಹೆಸರು ಮುದ್ರಣ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರನ್ನು ಕಡ್ಡಾಯವಾಗಿ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಉಮಾದೇವಿ ಅವರು, ಕರ್ನಾಟಕ ರಾಜ್ಯದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಪ್ರತಿಯೊಂದು ಕೂಡ ಬೇರೆ ಭಾಷೆಯೊಂದಿಗೆ ಕನ್ನಡದಲ್ಲಿಯೂ ಇರಬೇಕು ಎಂದು ಉಲ್ಲೇಖಿಸಿದ್ದಾರೆ.

ಸುತ್ತೋಲೆಯಲ್ಲಿ ಏನಿದೆ?

ಸರ್ಕಾರವೂ, ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯೊಂದಿಗೆ ಕನ್ನಡದಲ್ಲಿಯೂ ಸಹ ಇರಬೇಕು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

27 mins ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

52 mins ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

13 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

15 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago