ದಾವಣಗೆರೆ: ರಾಜ್ಯ ಸರ್ಕಾರ ಜಾತಿ ಗಣತಿಯನ್ನು ಅಂಗೀಕರಿಸುವ ಹಠಕ್ಕೆ ಬಿಳಬಾರದು ಎಂದು ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
ಇಂದು ದಾವಣಗೆರೆಯ ಎಂಬಿಎ ಮೈದಾನದಲ್ಲಿ ನಡೆದ ಅಖಿಲ ಭಾರತ ವೀರಶೈವ ಮಹಾ ಸಭೆಯ 24 ನೇ ಮಹಾ ಅಧಿವೇಶನದ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿದ ಅವರು, ಸರ್ವರ ಭಾವನೆಗಳಿಗೆ ಬೆಲೆ ಕೊಡಬೇಕು. ಕಾಂತರಾಜ ಆಯೋಗದ ವರದಿಯಲ್ಲಿ ಹತ್ತಾರು ದೋಷಗಳಿದ್ದು, ಇದನ್ನ ಅಂಗೀಕರಿಸುವುದು ಬೇಡ ಎಂದು ಸರ್ಕಾರಕ್ಕೆ ಸೂಚಿಸಿದರು.
ಜಾತಿ ಗಣತಿ ವರದಿ ಸಮರ್ಪಕವಾಗಿಲ್ಲ, ಮೇಲಾಗಿ ಯಾವ ಜಾತಿಯ ಜನ ಸಂಖ್ಯೆ ಎಷ್ಟಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಹೀಗೆ ಮಾಧ್ಯಮಗಳಲ್ಲಿ ಬಹಿರಂಗವಾಗಿ ಬಂದ ವರದಿಯನ್ನ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಥವಾ ರಾಜ್ಯ ಸರ್ಕಾರ ಅಲ್ಲಗಳೆದಿಲ್ಲ. ಈ ಎಲ್ಲ ಕಾರಣಕ್ಕೆ ಜಾತಿ ಗಣತಿ ಅಂಗೀಕಾರ ಬೇಡ. ಈ ವಿಚಾರದಲ್ಲಿ ಸರ್ಕಾರ ಹಟಕ್ಕೆ ಬಿಳಬಾರದು. ನಮ್ಮದು ಸರ್ವಜನಾಂಗದ ಶಾಂತಿಯ ತೋಟ. ಜಾತಿ ಗಣತಿ ಅಂಗೀಕಾರ ಬೇಡ ಎಂದು ಶಾಮನೂರ ಹೇಳಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…