ರಾಜ್ಯ

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಸಮಗ್ರ ‘ಕರ್ನಾಟಕ ಆನೆ ಶಿಬಿರ ಸುರಕ್ಷತಾ ಪ್ರೋಟೋಕಾಲ್’ ಅನ್ನು ಜಾರಿಗೆ ತಂದಿದೆ.

ಮೇ 19ರಂದು ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಎರಡು ಆನೆಗಳ ಗುದ್ದಾಟದಲ್ಲಿ ಸಿಲುಕಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.

ಈ ಹೊಸ ನಿಯಮಗಳ ಪ್ರಕಾರ, ಪ್ರವಾಸಿಗರು ಇನ್ನು ಮುಂದೆ ಆನೆಗಳನ್ನು ಮುಟ್ಟುವುದು, ಸ್ನಾನ ಮಾಡಿಸುವುದು ಅಥವಾ ಆಹಾರ ನೀಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಹೊಸ ಮಾರ್ಗಸೂಚಿಗಳ ಅನ್ವಯ, ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಶಿಬಿರಗಳಲ್ಲಿ ಗುರುತಿಸಲಾದ ‘ಹಸಿರು ವಲಯ’ ಅಥವಾ ವೀಕ್ಷಣಾ ಗ್ಯಾಲರಿಯಲ್ಲೇ ನಿಂತು ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗುತ್ತದೆ.

ಆನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಆನೆಗಳ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಅರಣ್ಯ ಇಲಾಖೆ ಜಾರಿಗೆ ತಂದಿರುವ ಈ ಹೊಸ ನಿಯಮಗಳು ರಾಜ್ಯದ ಎಲ್ಲಾ ಶಿಬಿರಗಳಲ್ಲಿ ಶೀಘ್ರವೇ ಅನುಷ್ಠಾನಗೊಳ್ಳಲಿವೆ.

ಸಿಸಿಟಿವಿ ನಿಗಾ:
ಆನೆಗಳ ಹಾಗೂ ಪ್ರವಾಸಿಗರ ಎಲ್ಲಾ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ. ಸಾರ್ವಜನಿಕ ವೀಕ್ಷಣೆಗೆ ಒಂದು ಶಿಬಿರದಲ್ಲಿ ಗರಿಷ್ಟ 10 ಆನೆಗಳನ್ನು ಮಾತ್ರ ಇರಿಸಲು ಅವಕಾಶ ನೀಡಲಾಗಿದೆ.

ಪ್ರವಾಸಿಗರಿಗೆ ಸಮಯ ಮತ್ತು ಸಂಖ್ಯಾ ಮಿತಿ
ಶಿಬಿರದ ಸಾಮರ್ಥ್ಯ, ಆನೆಗಳ ಸಂಖ್ಯೆ ಮತ್ತು ಪ್ರವಾಸಿಗರ ದಟ್ಟಣೆಯನ್ನು ಆಧರಿಸಿ ಪ್ರವಾಸಿಗರ ಬ್ಯಾಚ್‌ಗಳು ಹಾಗೂ ವೀಕ್ಷಣಾ ಸಮಯವನ್ನು ನಿಗದಿಪಡಿಸಲಾಗುತ್ತದೆ. ಹಸಿರು ವಲಯದಲ್ಲಿ ಗರಿಷ್ಟ 50 ರಿಂದ 75 ಪ್ರವಾಸಿಗರಿಗೆ ಮಾತ್ರ ಅವಕಾಶ ಇರಲಿದೆ. ಆನೆಗಳನ್ನು ವೀಕ್ಷಿಸಲು 20 ರಿಂದ 30 ನಿಮಿಷಗಳ ಕಾಲಾವಕಾಶ ನೀಡಲಾಗುತ್ತಿದ್ದು, ಅದಕ್ಕೂ ಮೊದಲು 10 ನಿಮಿಷಗಳ ಬ್ರೀಫಿಂಗ್ ಸಮಯ ಹಾಗೂ ೧೦ ನಿಮಿಷಗಳ ಬಫರ್ ಸಮಯ ಇರಲಿದೆ.

10 ಶಿಬಿರ 114 ಆನೆಗಳು
ರಾಜ್ಯದ 10 ಆನೆ ಶಿಬಿರಗಳಲ್ಲಿ ಒಟ್ಟು 114 ಆನೆಗಳಿದ್ದು, ಇದು ದೇಶದಲ್ಲೇ ಅತಿ ಹೆಚ್ಚಾಗಿದೆ. ಪ್ರವಾಸಿಗರಿಗೆ ಪ್ರವೇಶ ಇರುವ ಪ್ರಮುಖ ಶಿಬಿರಗಳಲ್ಲಿ ದುಬಾರೆ, ಹಾರಂಗಿ, ಮತ್ತಿಗೋಡು, ಸಕ್ರೆಬೈಲು ಮತ್ತು ದಾಂಡೇಲಿಯ ಪನ್ಸೋಲಿಯಲ್ಲಿ ಪ್ರವಾಸಿಗರಿಗೆ ಅವಕಾಶವಿದೆ.

ಮೂರು ವಲಯಗಳು
ಕೆಂಪು ವಲಯ: ಆನೆಗಳಿಗೆ ಸ್ನಾನ, ಆಹಾರ, ಟೆಥರಿಂಗ್ ಮತ್ತು ಪಶುವೈದ್ಯಕೀಯ ಚಿಕಿತ್ಸೆ ನೀಡುವ ಪ್ರದೇಶ. ಇಲ್ಲಿ ಮಾವುತರು, ವೈದ್ಯರು ಹಾಗೂ ಸಿಬ್ಬಂದಿಗೆ ಮಾತ್ರ ಪ್ರವೇಶ
ಕಿತ್ತಳೆ ವಲಯ: ಸಿಬ್ಬಂದಿ ಓಡಾಟ ಹಾಗೂ ತುರ್ತು ಕಾರ್ಯಾಚರಣೆಗಳಿಗೆ ಮೀಸಲಾದ ನಿಯಂತ್ರಿತ ಮಾರ್ಗ
ಹಸಿರು ವಲಯ: ಪ್ರವಾಸಿಗರು ಮಾರ್ಗದರ್ಶಕರೊಂದಿಗೆ ನಿಂತು ಆನೆಗಳನ್ನು ವೀಕ್ಷಿಸುವ ಪ್ರದೇಶ. ಇಲ್ಲಿ ಆನೆಗಳನ್ನು ಮುಟ್ಟುವುದು, ಆಹಾರ ನೀಡುವುದು ಅಥವಾ ಸ್ನಾನ ಮಾಡಿಸುವುದು ಸಂಪೂರ್ಣ ನಿಷೇಧ

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

15 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

11 hours ago