ಬೆಂಗಳೂರು: ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.
ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…