ಬೆಂಗಳೂರು: ರಾಜ್ಯದ ಪಂಚ ಗ್ಯಾರಂಟಿಗಳ ಕುರಿತು ಸುಳ್ಳು ಜಾಹೀರಾತು ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ರಾಜ್ಯ ಸರ್ಕಾರ ಕೇಸ್ ದಾಖಲಿಸಲು ನಿರ್ಧರಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಖುದ್ದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಪೋಸ್ಟ್ ಮಾಡಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡದೆ ವಂಚಿಸಿದೆ ಎನ್ನುವ ಸುಳ್ಳು ಜಾಹೀರಾತನ್ನು ನೀಡಿದೆ. ಪುಟಗಟ್ಟಲೆ ನೀಡಿದ್ದ ಮಹಾರಾಷ್ಟ್ರದ ಬಿಜೆಪಿ ವಿರುದ್ಧ ಕರ್ನಾಟಕ ಸರ್ಕಾರ ಕೇಸು ದಾಖಲಿಸಿ ಸರಿಯಾದ ಪಾಠ ಕಲಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…