ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 3ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4 ಮತ್ತು 16ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ರೂಪಿಸಿದೆ.
ಜನರಲ್ಲಿ ಮೈಬಿಸಿ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ ಮತ್ತು ವಾಕರಿಕೆ ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳಾಗಿದೆ.
ಈಡಿಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…