ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಜ್ವರ ಆರ್ಭಟಿಸುತ್ತಿದ್ದು, ದಿನೇ ದಿನೇ ಡೆಂಗ್ಯೂ ಫೀವರ್ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 3ರಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4 ಮತ್ತು 16ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಲು ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ರೂಪಿಸಿದೆ.
ಜನರಲ್ಲಿ ಮೈಬಿಸಿ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ದದ್ದು ಮತ್ತು ಕೆಲವು ಸಲ ರಕ್ತಸ್ರಾವ ಮತ್ತು ವಾಕರಿಕೆ ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಪ್ರಮುಖ ಲಕ್ಷಣಗಳಾಗಿದೆ.
ಈಡಿಸ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಉಂಟಾಗುತ್ತದೆ. ಸೋಂಕಿತ ವ್ಯಕ್ತಿಯನ್ನು ಕಚ್ಚಿ ನಂತರ ಸೋಂಕಿಲ್ಲದ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆಯು ಬರುತ್ತದೆ. ಇದು ಪ್ರಪಂಚದಾದ್ಯಂತ ಉಷ್ಣವಲಯ ಮತ್ತು ಉಪ ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…