ಬೆಂಗಳೂರು: ಕನ್ನಡ ವಿಶ್ವವಿದ್ಯಾನಿಲಯ, ಜಾನಪದ ವಿಶ್ವವಿದ್ಯಾನಿಲಯ, ಬೆಂಗಳೂರು, ಬೆಂಗಳೂರು ನಗರ, ಬೆಂಗಳೂರು ಉತ್ತರ ಸೇರಿದಂತೆ ಹತ್ತು ವಿಶ್ವವಿದ್ಯಾಯಲಗಳ ಸಿಂಡಿಕೇಟ್ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ.
ಮೂರು ವರ್ಷಗಳ ಅವಧಿಗೆ ಸಿಂಡಿಕೇಟ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಮಹಿಳೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ನಾಮನಿರ್ದೇಶನ ಸದಸ್ಯರ ನೇಮಕದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದೆ.
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್ಗೆ ಆಯೇಷ, ಫರ್ಜಾನಾ, ಡಾ.ಎಚ್.ಕೃಷ್ಣರಾಮ್, ಡಾ.ಫ್ರಾನ್ಸಿಸ್ ಅಸ್ಸಿಸಿ ಅಲೇದ, ವಿ.ಶಿವಕುಮಾರ್, ಕೆ.ಪಿ.ಪಾಟೀಲ್, ಡಾ.ಬೀರಪ್ಪ ಆಯ್ಕೆಯಾಗಿದ್ದಾರೆ.
ವಿಶೇಷವೆಂದರೆ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮೈಸೂರು ತಾಲ್ಲೂಕಿನ ಸಾಲುಂಡಿ ಗ್ರಾಮದ ಡಾ.ಬೀರಪ್ಪ ಅವರು ಆಯ್ಕೆಯಾಗಿದ್ದಾರೆ. ಇವರು ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಪಿಎಚ್ಡಿ ಪದವಿ ಪಡೆದಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರ ಸೇವೆಯನ್ನು ಗುರುತಿಸಿ ಉನ್ನತ ಶಿಕ್ಷಣ ಇಲಾಖೆ ಸಿಂಡಿಕೇಟ್ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಮಂಡ್ಯ: ಕನ್ನಡ ಕರ್ನಾಟಕ ಫೌಂಡೇಶನ್, ಎಂಪ್ಟಿ ಪಾಕೆಟ್ ಡ್ರೀಮ್ಸ್ ಜೊತೆಗೂಡಿ ಆಯೋಜಿಸಿದ್ದ ಆಪ್ತ ಸಂವಾದ: ಒಂದು ಪುಸ್ತಕ ಕ್ರಾಂತಿ ಕಾರ್ಯಕ್ರಮದ…
ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…