ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ ಅರ್ಹ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ಮೀಸಲಿಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ಉಳಿತಾಯದ ಲೆಕ್ಕಾಚಾರವನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಂಪುಟದ ಸಚಿವರು ಗ್ಯಾರಂಟಿ ಪರಿಷ್ಕರಣೆಗೆ ಒಲವು ತೋರಿದ್ದಾರೆ. ಉಳಿತಾಯ ಲೆಕ್ಕಾಚಾರ ಹಾಕಿಕೊಂಡಿರುವುದರಿಂದ ಬಿಪಿಎಲ್ ಮಾನದಂಡ ನಿಗದಿಪಡಿಸುವ ಚಿಂತನೆಯೂ ಸಹ ಇದೆ ಎನ್ನಲಾಗುತ್ತಿದೆ.
ಇನ್ನು ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದಲ್ಲಿ ಪರಿಷ್ಕರಣೆ ಮಾಡಲು ಸಾಧ್ಯವಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…