ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ ಅರ್ಹ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ಮೀಸಲಿಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ಉಳಿತಾಯದ ಲೆಕ್ಕಾಚಾರವನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಂಪುಟದ ಸಚಿವರು ಗ್ಯಾರಂಟಿ ಪರಿಷ್ಕರಣೆಗೆ ಒಲವು ತೋರಿದ್ದಾರೆ. ಉಳಿತಾಯ ಲೆಕ್ಕಾಚಾರ ಹಾಕಿಕೊಂಡಿರುವುದರಿಂದ ಬಿಪಿಎಲ್ ಮಾನದಂಡ ನಿಗದಿಪಡಿಸುವ ಚಿಂತನೆಯೂ ಸಹ ಇದೆ ಎನ್ನಲಾಗುತ್ತಿದೆ.
ಇನ್ನು ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದಲ್ಲಿ ಪರಿಷ್ಕರಣೆ ಮಾಡಲು ಸಾಧ್ಯವಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…