ರಾಜ್ಯ

ಅಂಗಾಂಗ ದಾನಿಗಳನ್ನು ಗುರ್ತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ: ಗುಂಡೂರಾವ್‌

ಬೆಂಗಳೂರು : ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ.

ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ.

andolanait

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

2 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

2 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

2 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

2 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

2 hours ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

2 hours ago