ರಾಜ್ಯ

ಅಂಗಾಂಗ ದಾನಿಗಳನ್ನು ಗುರ್ತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ: ಗುಂಡೂರಾವ್‌

ಬೆಂಗಳೂರು : ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.

ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ.

ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

4 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

18 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

18 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

18 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

18 hours ago