ಬೆಂಗಳೂರು : ಪ್ರತಿಫಲಾಪೇಕ್ಷೆ ಇಲ್ಲದೆ ಅಂಗಾಂಗ ದಾನ ಮಾಡುವ ವ್ಯಕ್ತಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ಕುರಿತಂತೆ ನೀತಿ ರೂಪಿಸಲು ಪರಿಶೀಲಿಸುತ್ತಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸಚಿವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ಅಂಗಾಂಗ ದಾನ ಮಾಡುವ ವ್ಯಕ್ತಿ ಅಥವಾ ಕುಟುಂಬಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಗೌರವಿಸುವ ಹಾಗು ತಮಿಳುನಾಡು ಮಾದರಿಯಲ್ಲಿ ಅಂಗಾಂಗ ದಾನಿಗಳ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನಡೆಸುವ ಬಗ್ಗೆಯೂ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ.
ಈ ಮೂಲಕ ಸರ್ಕಾರ ಅಂಗಾಂಗ ದಾನದ ಮಹತ್ವವನ್ನು ಸಾರಲು ಮತ್ತು ಮತ್ತಷ್ಟು ಜನರಿಗೆ ಅಂಗಾಂಗ ದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಿದೆ ಎಂದಿದ್ದಾರೆ.
ಅಂಗಾಂಗಗಳ ವೈಫಲ್ಯದಿಂದ ಪ್ರತಿನಿತ್ಯ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವು ಅನಿವಾರ್ಯವಾದಾಗ ಸಕ್ರಿಯ ಹಾಗು ಉತ್ತವ ಸ್ಥಿತಿಯಲ್ಲಿರುವ ಅಂಗಾಂಗ ದಾನದಿಂದ ಬಹಳಷ್ಟು ಜೀವಗಳ ರಕ್ಷಣೆ ಸಾಧ್ಯವಾಗುತ್ತದೆ. ಪ್ರಸ್ತುತ ಸಂದರ್ಭದಲ್ಲಿ ಅಂಗಾಂಗಗಳ ಬೇಡಿಕೆ ಮತ್ತು ಪೂರೈಕೆ ನಡುವೆ ಅಜಗಜಾಂತರ ವ್ಯತ್ಯಾಸವಿದ್ದು, ಅದನ್ನು ಸರಿದೂಗಿಸಲು ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಅಂಗಾಂಗಗಳ ದಾನಿಗಳ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡುವ ನಿರ್ಣಯ ಮಹತ್ವದ ಉತ್ತೇಜನವಾಗಲಿದೆ ಎಂದು ಹೇಳಲಾಗುತ್ತಿದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…