ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೆಲ ತಿಂಗಳ ಹಿಂದೆ ನಡೆದಿದ್ದ ವಿದ್ಯಾರ್ಥಿನಿ ಪ್ರಬುದ್ದ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಸಾಮಾಜಿಕ ಹೋರಾಟಗಾರರಾದ ಕೆ.ಆರ್ ಸೌಮ್ಯ ಎಂಬುವವರ ಪುತ್ರಿ ಪ್ರಬುದ್ದ ಆಗಿದ್ದಾರೆ. ಹಲವಾರು ವಿಚಾರಗಳಲ್ಲಿ, ಜನರ ಪರವಾಗಿ ಧನಿ ಎತ್ತುವ ಮೂಲಕ ನ್ಯಾಯ ಕೊಡಿಸಿದ ನನಗೆ ಇಂದು ನ್ಯಾಯ ಸಿಗುತ್ತಿಲ್ಲ. ಪೊಲೀಸರಿಂದ ಸರಿಯಾದ ಸ್ಪಂದನೆ ಹಾಗೂ ತನಿಖೆ ನಡೆಯುತ್ತಿಲ್ಲ. ಈ ಬಗ್ಗೆ ಸಮಗ್ರ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸೌಮ್ಯ ಅವರು ಆಗ್ರಹಿಸಿದ್ದರು.
ಇದೇ ಮೇ.15 ರಂದು ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವತೀಯ ಬಿಬಿಎ ವಿದ್ಯಾರ್ಥಿನಿ ಪ್ರಬುದ್ದ ಅವರ ಕೊಲೆಯಾಗಿತ್ತು. ಈ ಬಗ್ಗೆ ಅವರ ತಾಯಿ ಸಿಐಡಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದರು.
ಈ ಮನವಿಯನ್ನು ಪುರಸ್ಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…