ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್ ಎಂದು ಜೆಡಿಎಸ್ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಉತ್ತರ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರಲು ನಾಲಾಯಕ್ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ? ಕೆ.ಆರ್.ಮಾರ್ಕೆಟ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ.
ಇದನ್ನು ಎಲ್ಲರೂ ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುತ್ತೀದ್ದೀರಿ. ಆದ್ದರಿಂದ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ವಾಗ್ದಾಳಿ ನಡೆಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…