ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಿರಲು ನಾಲಾಯಕ್ ಎಂದು ಜೆಡಿಎಸ್ ಕಿಡಿಕಾರಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಉತ್ತರ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿರಲು ನಾಲಾಯಕ್ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅವರೇ ಅಧಿಕಾರ ಅನುಭವಿಸುವಾಗ ನಿಮಗೆ ಮರೆವಿನ ಕಾಯಿಲೆಯೇ? ಕೆ.ಆರ್.ಮಾರ್ಕೆಟ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಇಡೀ ರಾಜ್ಯವೇ ತಲೆ ತಗ್ಗಿಸುವ ಹೀನ ಕೃತ್ಯವಾಗಿದೆ.
ಇದನ್ನು ಎಲ್ಲರೂ ಪ್ರಶ್ನಿಸಿದರೇ ಹಿಂದಿನ ಸರ್ಕಾರಗಳ ಕಾಲದಲ್ಲಿ ರೇಪ್ ಆಗಿಲ್ವಾ ಎಂದು ಸಮರ್ಥಿಸಿಕೊಳ್ಳುತ್ತೀದ್ದೀರಿ. ಆದ್ದರಿಂದ ನೀವು ರಾಜ್ಯದ ಮುಖ್ಯಮಂತ್ರಿಯಾಗಿರಲು ನಾಲಾಯಕ್ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ದರೋಡೆ, ಕೊಲೆ, ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ವಾಗ್ದಾಳಿ ನಡೆಸಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…