ರಾಜ್ಯ

ಜನತೆಗೆ ಮತ್ತೊಂದು ಶಾಕ್‌: ಶೀಘ್ರದಲ್ಲೇ ಹಾಲಿನ ದರ ಏರಿಕೆ ಸುಳಿವು ನೀಡಿದ ಸಚಿವ ವೆಂಕಟೇಶ್‌

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆಯ ನಂತರ ಈಗ ರಾಜ್ಯ ಸರ್ಕಾರ ಜನರಿಗೆ ಮತ್ತೊಂದು ಶಾಕ್‌ ನೀಡಲು ಸಿದ್ಧತೆ ನಡೆಸುತ್ತಿದ್ದು, ಹಾಲಿನ ದರ ಏರಿಕೆಗೆ ಚಿಂತನೆ ನಡೆಸಿದೆ ಎಂದು ಸಚಿವ ವೆಂಕಟೇಶ್‌ ಮಾಹಿತಿ ನೀಡಿದ್ದಾರೆ.

ಹಾಲಿನ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ವೆಂಕಟೇಶ್‌ ಅವರು, ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ತೀವ್ರ ಏರಿಕೆ ಆಗಿದೆ. ಈ ಹಿನ್ನೆಲೆಯಲ್ಲಿ ಹಾಲಿನ ದರ 10 ರೂ ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದಾರೆ. ಅನ್ನದಾತರ ಬೇಡಿಕೆಯ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದ್ದು, ಎಲ್ಲಾ ರೈತರು ಕೂಡ ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಹಾಲಿನ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಆದರೆ ಎಷ್ಟು ದರ ಹೆಚ್ಚಳ ಮಾಡುತ್ತೇವೆ ಎಂಬುದರ ಬಗ್ಗೆ ಇನ್ನು ತೀರ್ಮಾನ ಆಗಿಲ್ಲ ಎಂದರು.

ಇನ್ನು ಹಾಲಿನ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡರೆ ಶೀಘ್ರದಲ್ಲೇ ಹಾಲಿನ ದರ ದುಬಾರಿಯಾಗುದ ಸಾಧ್ಯತೆಯಿದೆ ಎನ್ನಲಾಗಿದೆ.

ಒಟ್ಟಾರೆಯಾಗಿ ಬಸ್‌ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಹಾಲಿನ ಬೆಲೆ ಏರಿಕೆ ಮಾಡಲು ಮುಂದಾಗಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಿನ ದರ ಏರಿಕೆಯಿಂದ ರೈತರಿಗೆ ಸಹಕಾರಿಯಾದರೆ, ಹಾಲು, ಮೊಸರು ಸೇರಿದಂತೆ ಡೈರಿ ಉತ್ಪನ್ನಗಳನ್ನು ಕೊಂಡುಕೊಳ್ಳುವವರು ಜೇಬು ಮುಟ್ಟಿ ನೋಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಈ ಹಿನ್ನೆಲೆಯಲ್ಲಿ ಜನತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ವಿಪಕ್ಷಗಳು ಕೂಡ ಸರ್ಕಾರದ ವಿರುದ್ಧ ಕೆಂಡಕಾರಿದ್ದು, ಗ್ಯಾರಂಟಿ ಯೋಜನೆ ಸರಿದೂಗಿಸಲು ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ಕಿಡಿಕಾರಿವೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago