ಬೆಂಗಳೂರು: ಪ್ರತಿ ವರ್ಷ ನಾಡ ಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಎಂ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ.
ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ಡಾ.ವೈ.ಕೆ.ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದರು. ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…