ರಾಜ್ಯ

ರಾಜ್ಯದ ಖ್ಯಾತಿಯನ್ನು ಹೆಚ್ಚಿಸಲು ಪೊಲೀಸರು ಶ್ರಮ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಕರೆ

ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೊಲೀಸರ ಬಗ್ಗೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಕಿವಿಮಾತು ಹೇಳಿದರು.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ, ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾಆದಾಯ ಹೆಚ್ಚಾಗುತ್ತದೆ ಎಂದರು.

ಸಾರ್ವಜನಿಕ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೊಲೀಸರು ಗಮನ ಹರಿಸಬೇಕು. ಪೊಲೀಸ್‌ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆಯ ಕೆಲಸ ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದರು.

ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್‌ ಕ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

3 mins ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

13 mins ago

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

34 mins ago

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ : ಯದುವೀರ್ ಆರೋಪ

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

45 mins ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

2 hours ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

2 hours ago